ಬಂಟ್ವಾಳ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಅವರು ಬಂಟ್ವಾಳ ತಾಲೂಕು ಕಚೇರಿಗೆ ಹಠಾತ್ ಭೇಟಿ ನೀಡಿ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಬಂಟ್ಚಾಳ ತಹಶೀಲ್ದಾರ್ ಅವರಿಗೆ ಸೂಚಿಸಿದ್ದಾರೆ.
ಭೂ ಮಂಜೂರಾತಿ ನಂತರ ಸಾರ್ವಜನಿಕರು 1-5 ಮಾಡಲು ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿರುವ ಬಗ್ಗೆ ಮಾಹಿತಿ ಇದ್ದು,ತಾಲೂಕು ಕಚೇರಿಗಳಲ್ಲಿ 1-5 ಪ್ರಕರಣಗಳ ಅರ್ಜಿಗಳನ್ನು ಆದ್ಯತೆಯಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಯಚರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದೇ ವೇಳೆ ತಾಲೂಕು ಕಚೇರಿಯ ರೆಕಾರ್ಡ್ ರೂಮನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆಯನ್ನು ವೀಕ್ಷಿಸಿದರು.
ಇದೇ ವೇಳೆ ಸರ್ವೆ ಇಲಾಖಾ ಕಚೇರಿಗೂ ಭೇಟಿ ನೀಡಿದ ಅವರು ಕಡತಗಳ ಸಂಗ್ರಹವನ್ನು ಪರಿಶೀಲಿಸಿದರು . ಸರ್ವೆ ಅರ್ಜಿ ವಿಲೇವಾರಿಯ ಮಾಹಿತಿ ಪಡೆದ ಅವರು ಯಾವುದೇ ಕಾರಣಕ್ಕೂ ಸರ್ವೆ ಕಾರ್ಯವನ್ನು ವಿಳಂಬಿಸಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆ, 1-5 ಪ್ರಕರಣಗಳ ವಿಲೇವಾರಿ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.
ಈ ಸಂದರ್ಭದಲ್ಲಿ ಭೂ ದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ, ಸಹಾಯಕ ನಿರ್ದೇಶಕ ನಿಸಾರ್ ಅಹಮದ್, ಉಪತಹಶಿಲ್ದಾರ್ ನರೇಂದ್ರನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ದರ್ಖಾಸು ಜಮೀನು ಸೇರಿದಂತೆ ಪ್ಲೋಟಿಂಗ್ ಆಗದ ಜಮೀನಿಗೆ ಸಂಬಂಧಿಸಿದಂತೆ ಸಾರ್ವಜನಿಕರು 1-5 ಗೆ ಅರ್ಜಿ ಕೊಟ್ಟು 5-6 ವರ್ಷಗಳೂ ಕಳೆದರೂ ಕಡತಗಳಿಗೆ ಇನ್ನು ಮುಕ್ತಿ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದರು.
1-5 ಪ್ಲೋಟಿಂಗ್ ಸಂಬಂಧಿಸಿದಂತೆ ಕಡತಗಳು ಬಂಟ್ವಾಳ ತಾಲೂಕು ತಹಸೀಲ್ದಾರರಿಂದ ಮಂಗಳೂರು ಸಹಾಯಕ ಆಯುಕ್ತರ ಕಛೇರಿಗೆ 10-20 ಬಾರಿ ಅಲೆದಾಡುತ್ತಿದ್ದು,ಅಧಿಕಾರಿಗಳು ಮಾತ್ರ ಕಡತಗಳಿಗೆ ಮುಕ್ತಿ ನೀಡದಿರುವುದು ಸಾರ್ವಜನಿಕ ವಲಯದಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತವಾಗಿದ್ದು,ಜಿಲ್ಲಾಧಿಕಾರಿಯವರಿಗೂ ಈ ಬಗ್ಗೆ ದೂರುಗಳು ಹೋಗಿತ್ತು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…