ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…