ಜನ ಮನದ ನಾಡಿ ಮಿಡಿತ

Advertisement

ಡಾ.ಕೆ.ಸದಾಶಿವ ಶೆಟ್ರಿಗೆ ಪದ್ಮವಿಭೂಷಣ ಪ್ರಶಸ್ತಿಯ ಗೌರವ ಸಿಗುವಂತಾಗಲಿ; ಚಂದ್ರಶೇಖರ ಸ್ವಾಮೀಜಿ

ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಾ ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ ಡಾ.ಕನ್ಯಾನ ಸದಾಶಿವ ಶೆಟ್ಟರ ಸಮಾಜ ಸ್ಪಂದನೆಯ ಕಲ್ಯಾಣ ಕಾರ್ಯ ಅನುಕರಣೀಯವಾಗಿದೆ.

ಅವರಿಗೆ ಅರ್ಹವಾಗಿಯೇ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇಂತಹ ಮಾನವೀಯ ಸಂಬAಧದ ವ್ಯಕ್ತಿತ್ವದವರು ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಆಧ್ಯಾತ್ಮಿಕ ವಿಶ್ವ ಗುರು ಅಂತಾರಾಷ್ಟ್ರೀಯ ವಾಸ್ತುತಜ್ಞರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನ ಆಶ್ರಮಕ್ಕೆ ಭೇಟಿ ನೀಡಿದ ಸಮಾಜ ಸೇವಕ ಡಾ.ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಆಶೀರ್ವಾದ ನೀಡಿ ಮಾತನಾಡಿದ್ರು. ಸದಾಶಿವ ಶೆಟ್ಟರಿಗೆ ಪದ್ಮವಿಭೂಷಣ ಗೌರವ ಸಿಗಲಿ. ಸಮಾಜದಲ್ಲಿ ಸಿರಿವಂತರು ತುಂಬ ಮಂದಿ ಇದ್ದಾರೆ. ಅನೇಕ ಮಂದಿ ಸಮಾಜದ ಸ್ಪಂದನೆಯಿAದ ದೂರವಿದ್ದಾರೆ. ಆದರೆ ಸದಾಶಿವ ಶೆಟ್ಟಿ ಅವರು ತಮ್ಮ ಗಳಿಕೆಯಲ್ಲಿ ಒಂದAಶವನ್ನು ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಮುಕ್ತ ನೆರವು ನೀಡುತ್ತಿರುವುದು ಶ್ಲಾಘನೀಯ. ತಾವು ಬೆಳೆದು ಸಮಾಜವು ಸಹ ಬೆಳೆಯಬೇಕೆಂಬ ಹಂಬಲದ ಕನ್ಯಾನ ಸದಾಶಿವ ಶೆಟ್ಟರ ಸಾಧನೆಗೆ ಕೇಂದ್ರ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿಯ ಗೌರವ ಸಿಗುವಂತಾಗಬೇಕು ಎಂದು ಶ್ರೀ ಚಂದ್ರಶೇಖರಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ನಿಂದ ಗೌರವಿಸಲ್ಪಟ್ಟಿರುವ ಕನ್ಯಾನ ಸದಾಶಿವ ಶೆಟ್ಟಿಯವರನ್ನು ಆಶ್ರಮದಿಂದ ವಿಶೇಷವಾಗಿ ಶಾಲು
ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ಚಿತ್ರ ನಟ ಹಾಗೂ ನಿರ್ಮಾಪಕ ಪಡುಬಿದ್ರಿ ಗುರುರಾಜ್ ಹೆಗ್ಡೆ, ಆಶ್ರಮದ ನಿರ್ದೇಶಕರಾದ ರಜನಿ ಸಿ. ಭಟ್, ರಾಘವ್ ಸೂರ್ಯ, ರಾಹುಲ್ ಸಿ ಭಟ್ ,ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!