ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಾ ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ ಡಾ.ಕನ್ಯಾನ ಸದಾಶಿವ ಶೆಟ್ಟರ ಸಮಾಜ ಸ್ಪಂದನೆಯ ಕಲ್ಯಾಣ ಕಾರ್ಯ ಅನುಕರಣೀಯವಾಗಿದೆ.
ಅವರಿಗೆ ಅರ್ಹವಾಗಿಯೇ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇಂತಹ ಮಾನವೀಯ ಸಂಬAಧದ ವ್ಯಕ್ತಿತ್ವದವರು ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಆಧ್ಯಾತ್ಮಿಕ ವಿಶ್ವ ಗುರು ಅಂತಾರಾಷ್ಟ್ರೀಯ ವಾಸ್ತುತಜ್ಞರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನ ಆಶ್ರಮಕ್ಕೆ ಭೇಟಿ ನೀಡಿದ ಸಮಾಜ ಸೇವಕ ಡಾ.ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಆಶೀರ್ವಾದ ನೀಡಿ ಮಾತನಾಡಿದ್ರು. ಸದಾಶಿವ ಶೆಟ್ಟರಿಗೆ ಪದ್ಮವಿಭೂಷಣ ಗೌರವ ಸಿಗಲಿ. ಸಮಾಜದಲ್ಲಿ ಸಿರಿವಂತರು ತುಂಬ ಮಂದಿ ಇದ್ದಾರೆ. ಅನೇಕ ಮಂದಿ ಸಮಾಜದ ಸ್ಪಂದನೆಯಿAದ ದೂರವಿದ್ದಾರೆ. ಆದರೆ ಸದಾಶಿವ ಶೆಟ್ಟಿ ಅವರು ತಮ್ಮ ಗಳಿಕೆಯಲ್ಲಿ ಒಂದAಶವನ್ನು ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಮುಕ್ತ ನೆರವು ನೀಡುತ್ತಿರುವುದು ಶ್ಲಾಘನೀಯ. ತಾವು ಬೆಳೆದು ಸಮಾಜವು ಸಹ ಬೆಳೆಯಬೇಕೆಂಬ ಹಂಬಲದ ಕನ್ಯಾನ ಸದಾಶಿವ ಶೆಟ್ಟರ ಸಾಧನೆಗೆ ಕೇಂದ್ರ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿಯ ಗೌರವ ಸಿಗುವಂತಾಗಬೇಕು ಎಂದು ಶ್ರೀ ಚಂದ್ರಶೇಖರಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ನಿಂದ ಗೌರವಿಸಲ್ಪಟ್ಟಿರುವ ಕನ್ಯಾನ ಸದಾಶಿವ ಶೆಟ್ಟಿಯವರನ್ನು ಆಶ್ರಮದಿಂದ ವಿಶೇಷವಾಗಿ ಶಾಲು
ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ಚಿತ್ರ ನಟ ಹಾಗೂ ನಿರ್ಮಾಪಕ ಪಡುಬಿದ್ರಿ ಗುರುರಾಜ್ ಹೆಗ್ಡೆ, ಆಶ್ರಮದ ನಿರ್ದೇಶಕರಾದ ರಜನಿ ಸಿ. ಭಟ್, ರಾಘವ್ ಸೂರ್ಯ, ರಾಹುಲ್ ಸಿ ಭಟ್ ,ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…