ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಅವರಿಬ್ಬರನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ನಡೆಸಲಿದ್ದಾರೆ.
ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ೨೦೨೧ರ ನವೆಂಬರ್ ೮ರಂದು ಕೇರಳ ರಾಜ್ಯದ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ತ್ರಿಶೂರ್ ಜೈಲಿಗೆ ಹಾಕಲಾಗಿತ್ತು. ಬಿ.ಜಿ.ಕೃಷ್ಣಮೂರ್ತಿ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ೫೩ ಪ್ರಕರಣಗಳು ಹಾಗೂ ಸಾವಿತ್ರಿ ವಿರುದ್ಧ ೨೨ ಪ್ರಕರಣಗಳು ತನಿಖೆಯಲ್ಲಿವೆ.
೨೦೧೨-೨೦೧೩ರಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಕಾರು, ಬೈಕಿಗೆ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಹತ್ಯಡ್ಕ ಗ್ರಾಮದ ಕುಂಟಲಪಲ್ಲೆಯಲ್ಲಿ ಗೋಡೆ ಬರಹ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇವರಿಬ್ಬರನ್ನು ಪೊಲೀಸರು ಬಾಡಿ ವಾರೆಂಟ್ ಮೂಲಕ ತ್ರಿಶೂರ್ ಜೈಲಿನಿಂದ ಎ.೭ರಂದು ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.
ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ನ್ಯಾಯಾಲಯವು ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…