ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಅವರಿಬ್ಬರನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ನಡೆಸಲಿದ್ದಾರೆ.
ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ೨೦೨೧ರ ನವೆಂಬರ್ ೮ರಂದು ಕೇರಳ ರಾಜ್ಯದ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ತ್ರಿಶೂರ್ ಜೈಲಿಗೆ ಹಾಕಲಾಗಿತ್ತು. ಬಿ.ಜಿ.ಕೃಷ್ಣಮೂರ್ತಿ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ೫೩ ಪ್ರಕರಣಗಳು ಹಾಗೂ ಸಾವಿತ್ರಿ ವಿರುದ್ಧ ೨೨ ಪ್ರಕರಣಗಳು ತನಿಖೆಯಲ್ಲಿವೆ.
೨೦೧೨-೨೦೧೩ರಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಕಾರು, ಬೈಕಿಗೆ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಹತ್ಯಡ್ಕ ಗ್ರಾಮದ ಕುಂಟಲಪಲ್ಲೆಯಲ್ಲಿ ಗೋಡೆ ಬರಹ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇವರಿಬ್ಬರನ್ನು ಪೊಲೀಸರು ಬಾಡಿ ವಾರೆಂಟ್ ಮೂಲಕ ತ್ರಿಶೂರ್ ಜೈಲಿನಿಂದ ಎ.೭ರಂದು ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.
ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ನ್ಯಾಯಾಲಯವು ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…