ಉಪ್ಪಿನಂಗಡಿ ವಳಾಲ್ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಮಂದಿರದ ಜೀರ್ಣೋದ್ಧಾರದ ಪ್ರಯುಕ್ತ ಮೂಡಬಿದ್ರಿ ಸ್ವಸ್ತಿ ಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದೊಂದಿಗೆ ಬೆಳ್ತಂಗಡಿಯ ಪ್ರತಿಷ್ಟ ಪುರೋಹಿತರಾದ ಜಯರಾಜ ಇಂದ್ರ ಅವರ ನೇತೃತ್ವದಲ್ಲಿ ಕಲ್ಯಾಣ ಮಂದಿರ ಆರಾಧನೆ ನಡೆಯಿತು.
ಈ ಸಂದರ್ಭ ಜಿನ ಮಂದಿರದ ಜೀರ್ಣೋದ್ಧಾರ ಮಾಡುವ ಸಂಕಲ್ಪವನ್ನು ಮಾಡಿ ಬಾಲಾಲಯಕ್ಕೆ ಮುಹೂರ್ತ ಮಾಡಲಾಯಿತು. ಸ್ವಾಮೀಜಿಯವರು ಮಾತನಾಡಿ, ಬಸದಿಯ ಜೀರ್ಣೋದ್ಧಾರ ವನ್ನು ಎಲ್ಲರೂ ಒಗ್ಗಟ್ಟಿನಿಂದ ಒಳ್ಳೆಯ ಮನಸ್ಸಿನಿಂದ ಅತಿ ಶೀಘ್ರದಲ್ಲಿ ಮಾಡಬೇಕು. ಈ ಪ್ರದೇಶದ ಎಲ್ಲಾ ಬಂಧುಗಳು ಜೀರ್ಣೋದ್ಧಾರಕ್ಕೆ ಸಹಕರಿಸಬೇಕು ಹಾಗೂ ಶ್ರೀ ಜೈನ ಮಠ ಮೂಡುಬಿದಿರೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.
ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಪೂರ್ಣ ಸಹಕಾರವನ್ನು ಪಡೆದುಕೊಳ್ಳಬೇಕೆಂದು ಸ್ವಾಮೀಜಿಯವರು ಆಶೀರ್ವಾದ ಪೂರಕ ಆದೇಶವನ್ನು ನೀಡಿದರು.
ಸಮಿತಿಯ ಎಲ್ಲಾ ಪದಾಧಿಕಾರಿಗಳು, ಬಂಧುಗಳು ಹಾಗೂ ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಎಲ್ಲಾ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…