ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಉಪ ರಾಜ್ಯಪಾಲರಾಗಿ ಮಂಗಳೂರು ಲಯನ್ಸ್ ಕ್ಲಬ್ ಇದರ ಮಾಜಿ ಅಧ್ಯಕ್ಷರು ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಗೋವರ್ಧನ್ ಕೆ. ಶೆಟ್ಟಿ ಇವರು ಆಯ್ಕೆ ಯಾಗಿದ್ದಾರೆ. ಏಪ್ರಿಲ್. 6 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಚುನಾಯಿತರಾದರು. ಇಂಜನಿಯರಿಂಗ್ ಪದವೀಧರರಾಗಿರುವ ಶ್ರೀಯುತರು ಗಣೇಶ ಟೈಲ್ ಫ್ಯಾಕ್ಟರಿಯ ಮಾಲೀಕರಾಗಿರುತ್ತಾರೆ.
ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ಲಯನ್ ಜಿಲ್ಲೆ 317 ಡಿ ಯಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4000ಕ್ಕೂ ಮಿಕ್ಕಿ ಲಯನ್ಸ್ ಸದಸ್ಯರು ಇದ್ದಾರೆ. ವಿಜೇತರಿಗೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ್ ಕೋಟಿಯಾನ್ ಹಾಗೂ ಇತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…