ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು.
ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…