ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪಿಯುಸಿ ಪ್ರಥಮ ರ್ಯಾಂಕ್ ವಿಜೇತರಿಗೆ ಜಿಲ್ಲಾಧಿಕಾರಿ ಸನ್ಮಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸನ್ಮಾನಿಸಿದರು.

 

ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರವರನ್ನು ಮಂಗಳವಾರ ಮಧ್ಯಾಹ್ನ ಫಲಿತಾಂಶ ಬಂದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿದ ಜಿಲ್ಲಾಧಿಕಾರಿಗಳು ಶಾಲು ಹೊದಿಸಿ, ಹಾರ ಫಲಪುಷ್ಪ ನೀಡಿ ಸನ್ಮಾನಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ಕಲಿಕಾ ವಿಧಾನ, ಅಧ್ಯಯನ, ಶ್ರದ್ಧೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರು, ಶಿಕ್ಷಕರನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಮೂಲ್ಯ ಕಾಮತ್ ಪಾಲಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧ ಕಾಮತ್, ದೀಪಶ್ರೀ ಪಾಲಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್.ಜಿ., ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‍ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!