ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು : 41 ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವ, ಸಮಸ್ಯೆ ಪರಿಹರಿಸಲು ಆಯುಕ್ತರಿಗೆ ಮನವಿ

ಮಂಗಳೂರು ಮಹಾನಗರ ಪಾಲಿಕೆಯ 41 ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಿಕಟಪೂರ್ವ ಮನಪಾ ಸದಸ್ಯೆ ಶ್ರೀಮತಿ ಪೂರ್ಣಿಮಾ ರವರ ನೇತೃತ್ವದಲ್ಲಿ ಸ್ಥಳೀಯರು ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಪೂರ್ಣಿಮಾರವರು, ಗೌರಿಮಠ, ಟಿ.ಟಿ.ರಸ್ತೆ, ಮಾರ್ಕೆಟ್ ರಸ್ತೆ, ಶರವು ದೇವಸ್ಥಾನ ರಸ್ತೆ, ಮಹಾಮಾಯ ಟೆಂಪಲ್ ರಸ್ತೆ, ಬಂದರು ಪ್ರದೇಶದಲ್ಲಿ ಕಳೆದ 2- 3 ತಿಂಗಳಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸ್ಥಳೀಯರು ಸಮಸ್ಯೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಪಾಲಿಕೆಯು ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದೆ. ಪಾಲಿಕೆ ಸದಸ್ಯೆಯಾಗಿ ನನ್ನ ಅವಧಿ ಮುಗಿದಿರಬಹುದು, ಆದರೂ ನನ್ನ ವಾರ್ಡಿನ ಜನತೆಯ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ ಮತ್ತು ಜವಾಬ್ದಾರಿ. ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ಇನ್ನೂ ಸಹ ಎರಡು ತಿಂಗಳಿಗೆ ಆಗುವಷ್ಟು ನೀರು ಇದೆ ಎಂದಿದ್ದಾರೆ. ಹಾಗಾದರೆ ನೀರು ಯಾಕೆ ಬಿಡುತ್ತಿಲ್ಲ? ಸಚಿವರು ಒಮ್ಮೆ ಈ ವಾರ್ಡಿಗೆ ಬಂದು ಜನತೆಯ ಸಮಸ್ಯೆಯನ್ನು ಕಣ್ಣಾರೆ ಕಂಡು ಆಮೇಲೆ ಮಾತಾಡಬೇಕು. ಇನ್ನು ಎರಡರಿಂದ ಮೂರು ದಿನ ಕಾದು ನೋಡುತ್ತೇವೆ, ಸಮಸ್ಯೆ ಬಗೆಹರಿಯದಿದ್ದರೆ ವಾರ್ಡಿನ ಜನತೆಯೊಂದಿಗೆ ಸೇರಿಕೊಂಡು ಪ್ರತಿಭಟನೆ ನಡೆಸಿಯೇ ಸಿದ್ದ ಎಂದು ಎಚ್ಚರಿಕೆ ನೀಡಿದರು.

ವಾರ್ಡ್ ನಿವಾಸಿ ರಮೇಶ್ ಮಾತನಾಡಿ, ಸಚಿವರೇ ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಇಲ್ಲ, ಎಂದು ಹೇಳಿದ ಮೇಲೆ ಅಧಿಕಾರಿಗಳು ಯಾಕೆ ನೀರು ಬಿಡುತ್ತಿಲ್ಲ? ನಮಗೆ ಸಾಕಾಗಿ ಹೋಗಿದೆ. ಒಂದೋ ನೀರು ಕೊಡಿ, ಇಲ್ಲವೇ ವಿಷ ಕೊಡಿ. ನಿಕಟ ಪೂರ್ವ ಪಾಲಿಕೆ ಸದಸ್ಯೆ ನಮ್ಮ ಪರವಾಗಿ ಪ್ರತಿಭಟನೆ ಮಾಡುವುದಾದರೆ ನಾವು ಸಹ ಅವರ ಜೊತೆ ಕೈಜೋಡಿಸುತ್ತೇವೆ ಎಂದು ಆಕ್ರೋಶದಿಂದ ಹೇಳಿದರು.

ಸ್ಥಳೀಯರಾದ ಗಣಪತಿ ಕಾಮತ್, ಮುರಳಿಧರ್ ನಾಯಕ್, ಪೂರ್ಣಿಮಾ ರಾವ್, ರವೀಂದ್ರ ಮಲ್ಯ, ಶ್ರೀಮತಿ, ಸತೀಶ್ ಮಲ್ಯ, ವಿಜಯಲಕ್ಷ್ಮಿ, ಸ್ಮಿತಾ ಶೆಣೈ, ವಿದ್ಯಾ, ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!