ಮಂಗಳೂರು ಮಹಾನಗರ ಪಾಲಿಕೆಯ 41 ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಿಕಟಪೂರ್ವ ಮನಪಾ ಸದಸ್ಯೆ ಶ್ರೀಮತಿ ಪೂರ್ಣಿಮಾ ರವರ ನೇತೃತ್ವದಲ್ಲಿ ಸ್ಥಳೀಯರು ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೂರ್ಣಿಮಾರವರು, ಗೌರಿಮಠ, ಟಿ.ಟಿ.ರಸ್ತೆ, ಮಾರ್ಕೆಟ್ ರಸ್ತೆ, ಶರವು ದೇವಸ್ಥಾನ ರಸ್ತೆ, ಮಹಾಮಾಯ ಟೆಂಪಲ್ ರಸ್ತೆ, ಬಂದರು ಪ್ರದೇಶದಲ್ಲಿ ಕಳೆದ 2- 3 ತಿಂಗಳಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸ್ಥಳೀಯರು ಸಮಸ್ಯೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಪಾಲಿಕೆಯು ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದೆ. ಪಾಲಿಕೆ ಸದಸ್ಯೆಯಾಗಿ ನನ್ನ ಅವಧಿ ಮುಗಿದಿರಬಹುದು, ಆದರೂ ನನ್ನ ವಾರ್ಡಿನ ಜನತೆಯ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ ಮತ್ತು ಜವಾಬ್ದಾರಿ. ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ಇನ್ನೂ ಸಹ ಎರಡು ತಿಂಗಳಿಗೆ ಆಗುವಷ್ಟು ನೀರು ಇದೆ ಎಂದಿದ್ದಾರೆ. ಹಾಗಾದರೆ ನೀರು ಯಾಕೆ ಬಿಡುತ್ತಿಲ್ಲ? ಸಚಿವರು ಒಮ್ಮೆ ಈ ವಾರ್ಡಿಗೆ ಬಂದು ಜನತೆಯ ಸಮಸ್ಯೆಯನ್ನು ಕಣ್ಣಾರೆ ಕಂಡು ಆಮೇಲೆ ಮಾತಾಡಬೇಕು. ಇನ್ನು ಎರಡರಿಂದ ಮೂರು ದಿನ ಕಾದು ನೋಡುತ್ತೇವೆ, ಸಮಸ್ಯೆ ಬಗೆಹರಿಯದಿದ್ದರೆ ವಾರ್ಡಿನ ಜನತೆಯೊಂದಿಗೆ ಸೇರಿಕೊಂಡು ಪ್ರತಿಭಟನೆ ನಡೆಸಿಯೇ ಸಿದ್ದ ಎಂದು ಎಚ್ಚರಿಕೆ ನೀಡಿದರು.
ವಾರ್ಡ್ ನಿವಾಸಿ ರಮೇಶ್ ಮಾತನಾಡಿ, ಸಚಿವರೇ ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಇಲ್ಲ, ಎಂದು ಹೇಳಿದ ಮೇಲೆ ಅಧಿಕಾರಿಗಳು ಯಾಕೆ ನೀರು ಬಿಡುತ್ತಿಲ್ಲ? ನಮಗೆ ಸಾಕಾಗಿ ಹೋಗಿದೆ. ಒಂದೋ ನೀರು ಕೊಡಿ, ಇಲ್ಲವೇ ವಿಷ ಕೊಡಿ. ನಿಕಟ ಪೂರ್ವ ಪಾಲಿಕೆ ಸದಸ್ಯೆ ನಮ್ಮ ಪರವಾಗಿ ಪ್ರತಿಭಟನೆ ಮಾಡುವುದಾದರೆ ನಾವು ಸಹ ಅವರ ಜೊತೆ ಕೈಜೋಡಿಸುತ್ತೇವೆ ಎಂದು ಆಕ್ರೋಶದಿಂದ ಹೇಳಿದರು.
ಸ್ಥಳೀಯರಾದ ಗಣಪತಿ ಕಾಮತ್, ಮುರಳಿಧರ್ ನಾಯಕ್, ಪೂರ್ಣಿಮಾ ರಾವ್, ರವೀಂದ್ರ ಮಲ್ಯ, ಶ್ರೀಮತಿ, ಸತೀಶ್ ಮಲ್ಯ, ವಿಜಯಲಕ್ಷ್ಮಿ, ಸ್ಮಿತಾ ಶೆಣೈ, ವಿದ್ಯಾ, ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…