ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ತಾತ್ಕಾಲಿಕ ಎಲಂಗೆ ಸ್ಟಾಲ್ ಪಡೆದವರು ಸ್ವಚ್ಛತೆ, ಆಹಾರದ ಸುರಕ್ಷತೆಯ ಕುರಿತು ದೇವಸ್ಥಾನದಿಂದ ನಿಗಾ ಇಡುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಶಾಸಕರಿಗೆ ಮತ್ತು ದೇವಳದ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಲಾಗಿದೆ ಎಂದು ಸಂರಕ್ಷಣಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಜಾತ್ರೆಯ ಸಮಯದಲ್ಲಿ ಅಂಗಡಿಯ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಸ್ವಚ್ಚತೆಯ ಜಾಗೃತಿಗಾಗಿ ನಮ್ಮ ಸಮಿತಿಯಿಂದ ಅಭಿಯಾನ ಮಾಡಲಿದ್ದೇವೆ. ಎಲಂಗೆ ಪಡೆದ ಅಂಗಡಿಯವರಿಂದ ಸ್ವಚ್ಚತೆಗೆ ಮತ್ತೆ ಹಣ ವಸೂಲಿ ಮಾಡುವುದು ಸಮಂಜಸವಲ್ಲ. ಮದ್ಯಪಾನ/ದೂಮಪಾನಕ್ಕೆ ಅವಕಾಶ ನೀಡಬಾರದು. ಕಳೆದ ಬಾರಿ ಬಿಯರ್ ಬಾಟಲಿ ಒಂದು ಅಂಗಡಿಯ ಹಿಂಬದಿ ಕಂಡು ಬಂದಿದ್ದು, ಈ ಬಗ್ಗೆ ಪರವಾನಿಗೆ ನೀಡುವಾಗಲೇ ಈ ಎಲ್ಲಾ ವಿಚಾರಗಳ ಬಗ್ಗೆ ಅಫಿಡವಿಟ್ ಮಾಡಿ ಪಡಕೊಂಡರೆ ಒಳ್ಳೆಯದು. ಮೊಬೈಲ್ ಶೌಚಾಲಯದ ಸ್ವಚ್ಛತೆಗೆ ಸಿಬ್ಬಂದಿ ನೇಮಕ ಮಾಡಬೇಕು. ಮಕ್ಕಳು ವ್ಯಾಪಾರ ಮಾಡದಂತೆ ಮಕ್ಕಳ ಆಯೋಗವು ಗಮನಹರಿಸುವಂತೆ ವ್ಯವಸ್ಥೆ ಕಲ್ಪಿಸಬೇಕು. ಅಂಗಡಿ ಏಲಂ ಪಡೆದ ವ್ಯಕ್ತಿ ಅನ್ಯರಿಗೆ ಒಳಬಾಡಿಗೆಗೆ ಅಂಗಡಿ ನೀಡಿದ್ದಲ್ಲಿ ಮತ್ತೆ ಏಲಂ ಪ್ರಕ್ರಿಯೆ ನಡೆಸತಕ್ಕದ್ದು. ಅಲ್ಲದೇ ಎಲ್ಲಾ ಸ್ಟಾಲ್ಗಳು ಏಲಂ ಪ್ರಕ್ರಿಯೆಯಲ್ಲಿ ಭಾಗಿಯಾಗಿದೆಯೇ ಪರೀಕ್ಷಿಸಬೇಕು ಎಂದು ಮನವಿಯಲ್ಲಿ ತಿಳಿಸಿರುವುದಾಗಿ ಹೇಳಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…