ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ತಾತ್ಕಾಲಿಕ ಎಲಂಗೆ ಸ್ಟಾಲ್ ಪಡೆದವರು ಸ್ವಚ್ಛತೆ, ಆಹಾರದ ಸುರಕ್ಷತೆಯ ಕುರಿತು ದೇವಸ್ಥಾನದಿಂದ ನಿಗಾ ಇಡುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಶಾಸಕರಿಗೆ ಮತ್ತು ದೇವಳದ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಲಾಗಿದೆ ಎಂದು ಸಂರಕ್ಷಣಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.
ಜಾತ್ರೆಯ ಸಮಯದಲ್ಲಿ ಅಂಗಡಿಯ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಸ್ವಚ್ಚತೆಯ ಜಾಗೃತಿಗಾಗಿ ನಮ್ಮ ಸಮಿತಿಯಿಂದ ಅಭಿಯಾನ ಮಾಡಲಿದ್ದೇವೆ. ಎಲಂಗೆ ಪಡೆದ ಅಂಗಡಿಯವರಿಂದ ಸ್ವಚ್ಚತೆಗೆ ಮತ್ತೆ ಹಣ ವಸೂಲಿ ಮಾಡುವುದು ಸಮಂಜಸವಲ್ಲ. ಮದ್ಯಪಾನ/ದೂಮಪಾನಕ್ಕೆ ಅವಕಾಶ ನೀಡಬಾರದು. ಕಳೆದ ಬಾರಿ ಬಿಯರ್ ಬಾಟಲಿ ಒಂದು ಅಂಗಡಿಯ ಹಿಂಬದಿ ಕಂಡು ಬಂದಿದ್ದು, ಈ ಬಗ್ಗೆ ಪರವಾನಿಗೆ ನೀಡುವಾಗಲೇ ಈ ಎಲ್ಲಾ ವಿಚಾರಗಳ ಬಗ್ಗೆ ಅಫಿಡವಿಟ್ ಮಾಡಿ ಪಡಕೊಂಡರೆ ಒಳ್ಳೆಯದು. ಮೊಬೈಲ್ ಶೌಚಾಲಯದ ಸ್ವಚ್ಛತೆಗೆ ಸಿಬ್ಬಂದಿ ನೇಮಕ ಮಾಡಬೇಕು. ಮಕ್ಕಳು ವ್ಯಾಪಾರ ಮಾಡದಂತೆ ಮಕ್ಕಳ ಆಯೋಗವು ಗಮನಹರಿಸುವಂತೆ ವ್ಯವಸ್ಥೆ ಕಲ್ಪಿಸಬೇಕು. ಅಂಗಡಿ ಏಲಂ ಪಡೆದ ವ್ಯಕ್ತಿ ಅನ್ಯರಿಗೆ ಒಳಬಾಡಿಗೆಗೆ ಅಂಗಡಿ ನೀಡಿದ್ದಲ್ಲಿ ಮತ್ತೆ ಏಲಂ ಪ್ರಕ್ರಿಯೆ ನಡೆಸತಕ್ಕದ್ದು. ಅಲ್ಲದೇ ಎಲ್ಲಾ ಸ್ಟಾಲ್ಗಳು ಏಲಂ ಪ್ರಕ್ರಿಯೆಯಲ್ಲಿ ಭಾಗಿಯಾಗಿದೆಯೇ ಪರೀಕ್ಷಿಸಬೇಕು ಎಂದು ಮನವಿಯಲ್ಲಿ ತಿಳಿಸಿರುವುದಾಗಿ ಹೇಳಿದ್ದಾರೆ.
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…