ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕ ನಿಯಂತ್ರಣಕ್ಕೆ ಸಿಗದ ಕಾರು, ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ಕುಳಿತಿದೆ. ಹೀಗಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮಾರ್ಗವಾಗಿ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಿಂದಾಗಿ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿತ್ತು. ಬಳಿಕ ಡಿವೈಡರ್ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿಕೊಂಡು ಬದಿಗೆ ಸರಿಸುವ ಮೂಲಕ ಕಾರಿನ ಚಾಲಕನಿಗೆ ನೆರವು ನೀಡಿರುವುದಾಗಿ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…