ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟ, ಎಎಂಎಸ್ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದಾದ ಸಂತ ಫಿಲೋಮಿನಾ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.

 

ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಅಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಲಕ್ಷ್ಮೀರವರು ಆಯ್ಕೆಯಾದರು.

 

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್ ಜೊತೆಗೆ ಗ್ರಾಮರಸ್ ಗೇಮ್, ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್, ದೈಹಿಕ ಕ್ಷಮತೆ ನಿರಂತರ ಅಭ್ಯಾಸ ಬಹಳ ಮುಖ್ಯ. ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಭಾವನಾಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.

ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೋಳಯರು ಮಾತನಾಡಿ, ಈಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್‌ನಲ್ಲಿ ಸಾಧನೆ ಮಾಡಬೇಕಾದರೆ ಬದ್ರತೆ ಬಹಳ ಮುಖ್ಯ. ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕುರ್‌ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.

ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ.ಪುಸನ್ನು, ಕ್ರಿಕೆಟ್ ಪಂದ್ಯಾಟದ ವೀಕ್ಷಕರಾಗಿರುವ ಡಾ.ಪೊಡಿಯ, ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಲಾಸ್ ಪಿಂಟೋ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!