ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದಾದ ಸಂತ ಫಿಲೋಮಿನಾ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಅಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಲಕ್ಷ್ಮೀರವರು ಆಯ್ಕೆಯಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್ ಜೊತೆಗೆ ಗ್ರಾಮರಸ್ ಗೇಮ್, ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್, ದೈಹಿಕ ಕ್ಷಮತೆ ನಿರಂತರ ಅಭ್ಯಾಸ ಬಹಳ ಮುಖ್ಯ. ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಭಾವನಾಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.
ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೋಳಯರು ಮಾತನಾಡಿ, ಈಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್ನಲ್ಲಿ ಸಾಧನೆ ಮಾಡಬೇಕಾದರೆ ಬದ್ರತೆ ಬಹಳ ಮುಖ್ಯ. ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕುರ್ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.
ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ.ಪುಸನ್ನು, ಕ್ರಿಕೆಟ್ ಪಂದ್ಯಾಟದ ವೀಕ್ಷಕರಾಗಿರುವ ಡಾ.ಪೊಡಿಯ, ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಲಾಸ್ ಪಿಂಟೋ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…