ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದಾದ ಸಂತ ಫಿಲೋಮಿನಾ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಅಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಲಕ್ಷ್ಮೀರವರು ಆಯ್ಕೆಯಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್ ಜೊತೆಗೆ ಗ್ರಾಮರಸ್ ಗೇಮ್, ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್, ದೈಹಿಕ ಕ್ಷಮತೆ ನಿರಂತರ ಅಭ್ಯಾಸ ಬಹಳ ಮುಖ್ಯ. ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಭಾವನಾಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.
ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೋಳಯರು ಮಾತನಾಡಿ, ಈಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್ನಲ್ಲಿ ಸಾಧನೆ ಮಾಡಬೇಕಾದರೆ ಬದ್ರತೆ ಬಹಳ ಮುಖ್ಯ. ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕುರ್ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.
ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ.ಪುಸನ್ನು, ಕ್ರಿಕೆಟ್ ಪಂದ್ಯಾಟದ ವೀಕ್ಷಕರಾಗಿರುವ ಡಾ.ಪೊಡಿಯ, ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಲಾಸ್ ಪಿಂಟೋ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…