ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.
ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.
10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.
ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…