ವ್ಯಕ್ತಿಯೊಬ್ಬ ತನ್ನ ಸಂಬಂಧಿಯನ್ನು ಕೊಂದು, ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದಿರುವ ಘಟನೆ ಒಡಿಶಾದ ಕಿಯೋಂಜಾರ್ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಸಂಬಂಧಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ, ತಲೆಯನ್ನು ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಪೊಲೀಸ್ ಠಾಣೆಗೆ ಬಂದಿದ್ದಾನೆ.
ಆರೋಪಿ ಯುವಕ ಸ್ವತಃ ಪೊಲೀಸ್ ಠಾಣೆಗೆ ಹೋಗಿ ತನ್ನ ಅಪರಾಧವನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ಆರೋಪಿಯನ್ನು ಕಬಿ ದೇಹುರಿ ಎಂದು ಗುರುತಿಸಲಾಗಿದ್ದು, ಶುಕ್ರವಾರ ತಡರಾತ್ರಿ ತನ್ನ ಸಂಬಂಧಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಬಿಗೆ ತನ್ನ ಸಂಬಂಧಿ ಮೇಲೆ ಬಹಳ ದಿನಗಳಿಂದ ದ್ವೇಷವಿತ್ತು ಎಂದು ಹೇಳಲಾಗುತ್ತಿದೆ.
ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ ರಾತ್ರಿ ಗ್ರಾಮದಲ್ಲಿ ‘ದಂಡಾ ನಾಚಾ’ ಎಂಬ ಸಾಂಪ್ರದಾಯಿಕ ನೃತ್ಯ ನಡೆಯುತ್ತಿತ್ತು ಇದರಿಂದಾಗಿ ಹೆಚ್ಚಿನ ಗ್ರಾಮಸ್ಥರು ಕಾರ್ಯನಿರತರಾಗಿದ್ದರು. ಈ ಅವಕಾಶವನ್ನು ಬಳಸಿಕೊಳ್ಳುತ್ತಾ, ಕಬಿ ತನ್ನ ಸಂಬಂಧಿಯನ್ನು ಹೊಲಕ್ಕೆ ಕರೆದೊಯ್ದು, ಕೊಡಲಿಯಿಂದ ಕೊಚ್ಚಿ ಶಿರಚ್ಛೇದ ಮಾಡಿದ್ದ.
ಕೊಲೆಯ ನಂತರ, ಆರೋಪಿ ಕಬಿ ಕತ್ತರಿಸಿದ ತಲೆಯನ್ನು ಚೀಲದಲ್ಲಿ ಇಟ್ಟುಕೊಂಡು ನೇರವಾಗಿ ಸುಕತಿ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಅಲ್ಲಿ ಅವನು ಇಡೀ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಶರಣಾಗಿದ್ದಾರೆ.
ಪೊಲೀಸರು ಮೃತರ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಇಡೀ ಪ್ರಕರಣದ ಬಗ್ಗೆ ಆಳವಾದ ತನಿಖೆ ಆರಂಭಿಸಿದ್ದಾರೆ. ಕಿಯೋಂಜಾರ್ ಸದರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ವಿವಿಧ ವಿಷಯಗಳಿಗಾಗಿ ಅವರ ನಡುವೆ ಜಗಳಗಳು ನಡೆಯುತ್ತಿದ್ದವು ಎಂದು ಆರೋಪಿಯ ಚಿಕ್ಕಪ್ಪ ಅರ್ಜುನ್ ದೇಹುರಿ ಹೇಳಿದ್ದಾರೆ. ಕಿಯೋಂಜಾರ್ ಸದರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…