ಇತ್ತೀಚೆಗಷ್ಟೇ ಅಂಗೀಕಾರ ಪಡೆದಿರುವ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ.

ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ನಡೆದ ವಿಧ್ವಂಸಕ ಕೃತ್ಯಗಳ ವರದಿಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಶನಿವಾರ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಪೊಲೀಸರು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 138 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಮೃತರಲ್ಲಿ ಒಬ್ಬ ತಂದೆ ಮತ್ತು ಮಗನನ್ನು ಶನಿವಾರ ಗುಂಪೊಂದು ಹತ್ಯೆ ಮಾಡಿದ್ದರೆ, ಮತ್ತೊಬ್ಬ ಪ್ರತಿಭಟನಾಕಾರ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.



