ವ್ಯಕ್ತಿಯೊಬ್ಬ ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳಾದ ಶಿವೇಂದ್ರ ಯಾದವ್ (26) ಮತ್ತು ಆತನ ಸಹಾಯಕ ಗೌರವ್ (19) ಮೊದಲು ಆಸ್ತಿ ದಾಖಲೆಗಳನ್ನು ನೀಡಲು ಸಂತ್ರಸ್ತೆಗೆ ಕರೆ ಮಾಡಿ, ಆಕೆ ಬಂದ ಬಳಿಕ ಆಕೆಗೆ ಮದ್ಯ ಕುಡಿಸಿ, ಉಸಿರುಗಟ್ಟಿಸಿ ಕೊಂದು, ಸುಟ್ಟು ಹಾಕಿ, ಅರೆಬರೆ ಬೆಂದ ಶವವನ್ನು ನದಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದು ದಿನಗಳಿಂದ ಕಾಣೆಯಾಗಿದ್ದ ಅಂಜಲಿಯ ಶವ ಶನಿವಾರ ನದಿಯ ಬಳಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿಯು ತನ್ನ ತಂದೆ ಮತ್ತು ಹೆಂಡತಿಗೆ ವೀಡಿಯೊ ಕರೆ ಮಾಡಿ ಸಂತ್ರಸ್ತೆಯ ಶವವನ್ನು ತೋರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಕುಟುಂಬ ಸದಸ್ಯರು ಚರಂಡಿಯ ಬಳಿ ಸುಟ್ಟು ಕರಕಲಾದ ಸ್ಕೂಟರ್ ಅನ್ನು ಕಂಡುಕೊಂಡ ನಂತರ ಆಕೆಯ ವ್ಯವಹಾರ ಪಾರ್ಟ್ನರ್ ಆಗಿದ್ದ ವ್ಯಕ್ತಿ ಮೇಲೆ ಕೊಲೆ ಆರೋಪ ಹೊರಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದರು.
ಆಕೆಯ ಸಹೋದರಿ ಕಿರಣ್ ಹೇಳುವಂತೆ ಆರೋಪಿಯು ಅಂಜಲಿಯಿಂದ ಭೂಮಿಗಾಗಿ 6 ಲಕ್ಷ ರೂ.ಗಳನ್ನು ಪಡೆದಿದ್ದ. ನಂತರ ದಾಖಲೆಗಳನ್ನು ನೀಡುವ ನೆಪದಲ್ಲಿ ಅವನು ತನಗೆ ಕರೆ ಮಾಡಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಿದ್ದಾರೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ ಯಾದವ್ ಮತ್ತು ಅವರ ಪತ್ನಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…