ವ್ಯಕ್ತಿಯೊಬ್ಬ ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳಾದ ಶಿವೇಂದ್ರ ಯಾದವ್ (26) ಮತ್ತು ಆತನ ಸಹಾಯಕ ಗೌರವ್ (19) ಮೊದಲು ಆಸ್ತಿ ದಾಖಲೆಗಳನ್ನು ನೀಡಲು ಸಂತ್ರಸ್ತೆಗೆ ಕರೆ ಮಾಡಿ, ಆಕೆ ಬಂದ ಬಳಿಕ ಆಕೆಗೆ ಮದ್ಯ ಕುಡಿಸಿ, ಉಸಿರುಗಟ್ಟಿಸಿ ಕೊಂದು, ಸುಟ್ಟು ಹಾಕಿ, ಅರೆಬರೆ ಬೆಂದ ಶವವನ್ನು ನದಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದು ದಿನಗಳಿಂದ ಕಾಣೆಯಾಗಿದ್ದ ಅಂಜಲಿಯ ಶವ ಶನಿವಾರ ನದಿಯ ಬಳಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿಯು ತನ್ನ ತಂದೆ ಮತ್ತು ಹೆಂಡತಿಗೆ ವೀಡಿಯೊ ಕರೆ ಮಾಡಿ ಸಂತ್ರಸ್ತೆಯ ಶವವನ್ನು ತೋರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಕುಟುಂಬ ಸದಸ್ಯರು ಚರಂಡಿಯ ಬಳಿ ಸುಟ್ಟು ಕರಕಲಾದ ಸ್ಕೂಟರ್ ಅನ್ನು ಕಂಡುಕೊಂಡ ನಂತರ ಆಕೆಯ ವ್ಯವಹಾರ ಪಾರ್ಟ್ನರ್ ಆಗಿದ್ದ ವ್ಯಕ್ತಿ ಮೇಲೆ ಕೊಲೆ ಆರೋಪ ಹೊರಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದರು.
ಆಕೆಯ ಸಹೋದರಿ ಕಿರಣ್ ಹೇಳುವಂತೆ ಆರೋಪಿಯು ಅಂಜಲಿಯಿಂದ ಭೂಮಿಗಾಗಿ 6 ಲಕ್ಷ ರೂ.ಗಳನ್ನು ಪಡೆದಿದ್ದ. ನಂತರ ದಾಖಲೆಗಳನ್ನು ನೀಡುವ ನೆಪದಲ್ಲಿ ಅವನು ತನಗೆ ಕರೆ ಮಾಡಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಿದ್ದಾರೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ ಯಾದವ್ ಮತ್ತು ಅವರ ಪತ್ನಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…