ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ‘ಮಂಗಳೂರಿಗೂ ವಂದೇ ಭಾರತ್ ಸ್ಲೀಪರ್ ರೈಲು ನೀಡಲಾಗುವುದು’ – ಸಚಿವ ವಿ. ಸೋಮಣ್ಣ

ಮಂಗಳೂರು ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು ‘ಮಂಗಳೂರು, ಬೆಂಗಳೂರು ಸಂಸ್ಕಾರ, ಸಂಸ್ಕೃತಿ ಮತ್ತು ಸಹಬಾಳ್ವೆಗೆ ದೇಶದಲ್ಲಿ ಹೆಸರು ಪಡೆದಿದೆ. ಕರಾವಳಿ ಭಾಗದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯ 19 ಕೋಟಿ ರೂ.ಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್‌ನೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದರು.

ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಭಕ್ತಾದಿ ಗಳ ತಾಣವಾಗಿರುವ ಆ ನಿಲ್ದಾಣದಲ್ಲಿ ವಿಕಲಚೇತನರಿಗೂ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸೆಪ್ಟಂಬರ್ 25ರೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಣಗೊಳ್ಳಲಿವೆ ಎಂದು ಸಚಿವ ಸೋಮಣ್ಣ ವಿವರ ನೀಡಿದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!