ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ‘ಮಂಗಳೂರಿಗೂ ವಂದೇ ಭಾರತ್ ಸ್ಲೀಪರ್ ರೈಲು ನೀಡಲಾಗುವುದು’ – ಸಚಿವ ವಿ. ಸೋಮಣ್ಣ

ಮಂಗಳೂರು ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು ‘ಮಂಗಳೂರು, ಬೆಂಗಳೂರು ಸಂಸ್ಕಾರ, ಸಂಸ್ಕೃತಿ ಮತ್ತು ಸಹಬಾಳ್ವೆಗೆ ದೇಶದಲ್ಲಿ ಹೆಸರು ಪಡೆದಿದೆ. ಕರಾವಳಿ ಭಾಗದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯ 19 ಕೋಟಿ ರೂ.ಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್‌ನೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದರು.

ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಭಕ್ತಾದಿ ಗಳ ತಾಣವಾಗಿರುವ ಆ ನಿಲ್ದಾಣದಲ್ಲಿ ವಿಕಲಚೇತನರಿಗೂ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸೆಪ್ಟಂಬರ್ 25ರೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಣಗೊಳ್ಳಲಿವೆ ಎಂದು ಸಚಿವ ಸೋಮಣ್ಣ ವಿವರ ನೀಡಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!