ಮಂಗಳೂರು ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು ‘ಮಂಗಳೂರು, ಬೆಂಗಳೂರು ಸಂಸ್ಕಾರ, ಸಂಸ್ಕೃತಿ ಮತ್ತು ಸಹಬಾಳ್ವೆಗೆ ದೇಶದಲ್ಲಿ ಹೆಸರು ಪಡೆದಿದೆ. ಕರಾವಳಿ ಭಾಗದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯ 19 ಕೋಟಿ ರೂ.ಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್ನೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದರು.
ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಭಕ್ತಾದಿ ಗಳ ತಾಣವಾಗಿರುವ ಆ ನಿಲ್ದಾಣದಲ್ಲಿ ವಿಕಲಚೇತನರಿಗೂ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸೆಪ್ಟಂಬರ್ 25ರೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಣಗೊಳ್ಳಲಿವೆ ಎಂದು ಸಚಿವ ಸೋಮಣ್ಣ ವಿವರ ನೀಡಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…