ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ವಿಜಯವಾಡದಿಂದ ತಂದಿದ್ದ ಗಾಂಜಾ ಮಾರಾಟಕ್ಕೆ ಯತ್ನ; ಓರ್ವನ ಬಂಧನ

 ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌ ಅಹಮ್ಮದ್‌(31) ಬಂಧಿತ ಆರೋಪಿ. ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ‌.

5.75 ಲಕ್ಷ ಮೌಲ್ಯದ 7 ಕಿಲೋ 304 ಗ್ರಾಂ ತೂಕದ ಗಾಂಜಾ ವಶ

 

ಬಂಧಿತನಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್‌ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!