ಸಮುದಾಯದ ಯಾವುದೇ ವ್ಯಕ್ತಿ ಶಿಕ್ಷಕ ಎಂಬ ಪದಕ್ಕೆ ಸೆಳೆಯಾಗುತ್ತಾನೆ, ಶಿಕ್ಷಕರು ಶಿಸ್ತಿನಿಂದ ಕಾರ್ಯಪ್ರವರ್ತರಾದರೆ ಬಲಿಷ್ಠ ಸಮಾಜ ಕಟ್ಟಬಹುದು. ಶಿಕ್ಷಣ, ಶಿಕ್ಷಕ, ಶಿಸ್ತು, ಇವು ಮೂರು ಪರಸ್ಪರ ಹೊಂದಿಕೊಂಡು ಕಾರ್ಯಪ್ರವರ್ತರಾದಾಗ ಸಮುದಾಯ ಬಲಿಷ್ಠ ಗೊಳ್ಳುತ್ತದೆ ಎಂದು ಶ್ರೀ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪ್ರಾಧ್ಯಾಪಕ ಸಿ.ಎ. ಉದಯಾನಂದ ತಿಳಿಸಿದರು.
ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ ಆಡಳಿತಾತ್ಮಕ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಶಿಕ್ಷಕರ ಸಹಕಾರಿ ಸಂಘದ ಬಗ್ಗೆ ಎಲ್ಲರಿಗೂ ಅಭಿಮಾನವಿದೆ ಗೌರವವಿದೆ. ಗತವೈಭವ ಮರಳಿ ತರಲು ನಿರ್ದೇಶಕರು, ಸಿಬ್ಬಂದಿಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕ ಎಂ.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಂಘದ ಅಧ್ಯಕ್ಷ ಕೆಎಂಕೆ ಮಂಜನಾಡಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್, ಅಲೋ ಸಿಯಸ್ ಡಿಸೋಜಾ , ಪ್ರಮೀಳಾ, ಜಾಯ್ಸ್ ಡಿಸೋಜಾ, ಜಗದೀಶ್ ಶೆಟ್ಟಿ, ಲ್ಯಾನ್ಸಿ ಸಿ. ತಾವ್ರೋ, ತ್ಯಾಗಮ್ ಹರೇಕಳ, ರಾಧಾಕೃಷ್ಣ ರಾವ್, ನಿರ್ದೇಶಕರಾದ ಉಸ್ಮಾನ್, ಹಿಲ್ಡಾ ಕ್ಲೆಮನ್ಸಿಯಾ ಪಿಂಟೋ, ರೀಟಾ ಕಾಟಿಪಳ್ಳ, ವಾಣಿ, ವನಿತಾ ಸುರೇಶ್, ತಿಪ್ಪೋಜಿ, ವಾಸುದೇವ ರಾವ್, ಅಂಬರೀಶ್, ಚಂದ್ರಶೇಖರ್, ರೂಪಾಕ್ಷ, ವಾಸುದೇವ ರಾವ್, ರಘುನಾಥ್ ರಾವ್, ಕಾರ್ಯನಿರ್ವಹಣಾಧಿಕಾರಿ ಶರ್ಮಿಳಾ, ವಿನಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…