ಸಮುದಾಯದ ಯಾವುದೇ ವ್ಯಕ್ತಿ ಶಿಕ್ಷಕ ಎಂಬ ಪದಕ್ಕೆ ಸೆಳೆಯಾಗುತ್ತಾನೆ, ಶಿಕ್ಷಕರು ಶಿಸ್ತಿನಿಂದ ಕಾರ್ಯಪ್ರವರ್ತರಾದರೆ ಬಲಿಷ್ಠ ಸಮಾಜ ಕಟ್ಟಬಹುದು. ಶಿಕ್ಷಣ, ಶಿಕ್ಷಕ, ಶಿಸ್ತು, ಇವು ಮೂರು ಪರಸ್ಪರ ಹೊಂದಿಕೊಂಡು ಕಾರ್ಯಪ್ರವರ್ತರಾದಾಗ ಸಮುದಾಯ ಬಲಿಷ್ಠ ಗೊಳ್ಳುತ್ತದೆ ಎಂದು ಶ್ರೀ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪ್ರಾಧ್ಯಾಪಕ ಸಿ.ಎ. ಉದಯಾನಂದ ತಿಳಿಸಿದರು.
ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ ಆಡಳಿತಾತ್ಮಕ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಶಿಕ್ಷಕರ ಸಹಕಾರಿ ಸಂಘದ ಬಗ್ಗೆ ಎಲ್ಲರಿಗೂ ಅಭಿಮಾನವಿದೆ ಗೌರವವಿದೆ. ಗತವೈಭವ ಮರಳಿ ತರಲು ನಿರ್ದೇಶಕರು, ಸಿಬ್ಬಂದಿಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕ ಎಂ.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಂಘದ ಅಧ್ಯಕ್ಷ ಕೆಎಂಕೆ ಮಂಜನಾಡಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್, ಅಲೋ ಸಿಯಸ್ ಡಿಸೋಜಾ , ಪ್ರಮೀಳಾ, ಜಾಯ್ಸ್ ಡಿಸೋಜಾ, ಜಗದೀಶ್ ಶೆಟ್ಟಿ, ಲ್ಯಾನ್ಸಿ ಸಿ. ತಾವ್ರೋ, ತ್ಯಾಗಮ್ ಹರೇಕಳ, ರಾಧಾಕೃಷ್ಣ ರಾವ್, ನಿರ್ದೇಶಕರಾದ ಉಸ್ಮಾನ್, ಹಿಲ್ಡಾ ಕ್ಲೆಮನ್ಸಿಯಾ ಪಿಂಟೋ, ರೀಟಾ ಕಾಟಿಪಳ್ಳ, ವಾಣಿ, ವನಿತಾ ಸುರೇಶ್, ತಿಪ್ಪೋಜಿ, ವಾಸುದೇವ ರಾವ್, ಅಂಬರೀಶ್, ಚಂದ್ರಶೇಖರ್, ರೂಪಾಕ್ಷ, ವಾಸುದೇವ ರಾವ್, ರಘುನಾಥ್ ರಾವ್, ಕಾರ್ಯನಿರ್ವಹಣಾಧಿಕಾರಿ ಶರ್ಮಿಳಾ, ವಿನಯ ಮೊದಲಾದವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…