ಜನ ಮನದ ನಾಡಿ ಮಿಡಿತ

Advertisement

ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ

ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ರವಿವಾರ ಜರುಗಿತು.

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಎಪ್ರಿಲ್ 8 ರಿಂದ 14 ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ರವಿವಾರ ಎಪ್ರಿಲ್ 13 ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.

ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.

ಸೋಮವಾರ ಎಪ್ರಿಲ್ 14 ರಂದು ವ್ಯಾಸಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಲಿದೆ.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಲಿದೆ. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹರಿಗುರು ಕೃಪೆಗೆ ಪಾತ್ರರಾಗಲು ದೇಶ, ವಿದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!