ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.
ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ. ಮುಂದೆ ಇಲ್ಲಿನ ರೈಲ್ವೇ ಹಾಗೂ ಇತರೆ ಅಭಿವೃದ್ಧಿ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಸಂಸದರು ಭರವಸೆ ನೀಡಿದರು.
ಹಲವು ವರ್ಷಗಳ ಬೇಡಿಕೆ ಈಡೇರಿದ ಖುಷಿ:
ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಗ್ಗೆ, ಸಂಜೆ ಪ್ಯಾಸೆಂಜರ್ ರೈಲು ಓಡಾಟ ನಡೆಸಬೇಕೆಂಬ ಬೇಡಿಕೆ ಹಲವು ವರ್ಷಗಳಾದ್ದಾಗಿತ್ತು. ಹಲವು ಹೋರಾಟ, ಮನವಿಗಳ, ಒತ್ತಾಯದ ಪ್ರಯತ್ನದ ಫಲವಾಗಿ ಬೇಡಿಕೆ ಈಡೇರಿದಂತಾಗಿದ್ದು, ಸುಬ್ರಹ್ಮಣ್ಯ ವರೆಗೆ ಆಗಮಿಸಿದ ಪ್ಯಾಸೆಂಜರ್ ರೈಲು ಹೋರಾಟದ ಜಯದ ಖುಷಿ ಜನರಲ್ಲಿತ್ತು.
ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ವಿನಯಕುಮಾರ್ ಕಂದಡ್ಕ, ಪುಲಸ್ತ್ಯಾ ರೈ, ವಾಡಿಯಪ್ಪ ಗೌಡ ಎರ್ಮಾಯಿಲ್, ವೆಂಕಟರಮಣ ಗೌಡ ಕೊಲ್ಪೆ, ಸರೋಜಿನಿ ಜಯಪ್ರಕಾಶ್, ಸತೀಶ್ ಎರ್ಕ, ಉಮೇಶ್ ಕೊಂಬಾರುಗದ್ದೆ, ಕಿರಣ್ ಮದೆಪರ್ಲ, ಚಂದ್ರಶೇಖರ್ ನೂಜಿ, ನಾರಾಯಣ ಸಿರಿಬಾಗಿಲು, ಕೃಷ್ಣ ಶೆಟ್ಟಿ ಕಡಬ, ಕಿಶೋರ್ ಶಿರಾಡಿ, ಧಾಮೋದರ ಗುಂಡ್ಯ, ಮುರಳೀಧರ ಎರ್ಮಾಯಿಲ್, ಪ್ರಕಾಶ್ ಗುಂಡ್ಯ, ತುಕಾರಾಮ ಗೌಡ ಸೂಡ್ಲು, ಸುರೇಶ್ ಬಿಳಿನೆಲೆ, ಸಂತೋಷ್, ವಿನಯಚಂದ್ರ ಬಳಕ್ಕ, ರಮೇಶ್ ವಾಲ್ತಾಜೆ, ದುರ್ಗಾಪ್ರಸಾದ್ ಕಲ್ಲುಗುಡ್ಡೆ, ಕೃಷ್ಣಪ್ಪ ಗೌಡ, ಮನುದೇವ್ ಏನೆಕಲ್ಲು, ಪ್ರಸಾದ್ ನೆಟ್ಟಣ, ಅನಿತಾ ವಿಜಯಕುಮಾರ್ ಬಿಳಿನೆಲೆ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…