ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.
ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ. ಮುಂದೆ ಇಲ್ಲಿನ ರೈಲ್ವೇ ಹಾಗೂ ಇತರೆ ಅಭಿವೃದ್ಧಿ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಸಂಸದರು ಭರವಸೆ ನೀಡಿದರು.
ಹಲವು ವರ್ಷಗಳ ಬೇಡಿಕೆ ಈಡೇರಿದ ಖುಷಿ:
ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಗ್ಗೆ, ಸಂಜೆ ಪ್ಯಾಸೆಂಜರ್ ರೈಲು ಓಡಾಟ ನಡೆಸಬೇಕೆಂಬ ಬೇಡಿಕೆ ಹಲವು ವರ್ಷಗಳಾದ್ದಾಗಿತ್ತು. ಹಲವು ಹೋರಾಟ, ಮನವಿಗಳ, ಒತ್ತಾಯದ ಪ್ರಯತ್ನದ ಫಲವಾಗಿ ಬೇಡಿಕೆ ಈಡೇರಿದಂತಾಗಿದ್ದು, ಸುಬ್ರಹ್ಮಣ್ಯ ವರೆಗೆ ಆಗಮಿಸಿದ ಪ್ಯಾಸೆಂಜರ್ ರೈಲು ಹೋರಾಟದ ಜಯದ ಖುಷಿ ಜನರಲ್ಲಿತ್ತು.
ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ವಿನಯಕುಮಾರ್ ಕಂದಡ್ಕ, ಪುಲಸ್ತ್ಯಾ ರೈ, ವಾಡಿಯಪ್ಪ ಗೌಡ ಎರ್ಮಾಯಿಲ್, ವೆಂಕಟರಮಣ ಗೌಡ ಕೊಲ್ಪೆ, ಸರೋಜಿನಿ ಜಯಪ್ರಕಾಶ್, ಸತೀಶ್ ಎರ್ಕ, ಉಮೇಶ್ ಕೊಂಬಾರುಗದ್ದೆ, ಕಿರಣ್ ಮದೆಪರ್ಲ, ಚಂದ್ರಶೇಖರ್ ನೂಜಿ, ನಾರಾಯಣ ಸಿರಿಬಾಗಿಲು, ಕೃಷ್ಣ ಶೆಟ್ಟಿ ಕಡಬ, ಕಿಶೋರ್ ಶಿರಾಡಿ, ಧಾಮೋದರ ಗುಂಡ್ಯ, ಮುರಳೀಧರ ಎರ್ಮಾಯಿಲ್, ಪ್ರಕಾಶ್ ಗುಂಡ್ಯ, ತುಕಾರಾಮ ಗೌಡ ಸೂಡ್ಲು, ಸುರೇಶ್ ಬಿಳಿನೆಲೆ, ಸಂತೋಷ್, ವಿನಯಚಂದ್ರ ಬಳಕ್ಕ, ರಮೇಶ್ ವಾಲ್ತಾಜೆ, ದುರ್ಗಾಪ್ರಸಾದ್ ಕಲ್ಲುಗುಡ್ಡೆ, ಕೃಷ್ಣಪ್ಪ ಗೌಡ, ಮನುದೇವ್ ಏನೆಕಲ್ಲು, ಪ್ರಸಾದ್ ನೆಟ್ಟಣ, ಅನಿತಾ ವಿಜಯಕುಮಾರ್ ಬಿಳಿನೆಲೆ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…