ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಬಿಸಿರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಅನೇಕ ಆಚರಣೆಗಳು ನಡೆಯುತ್ತವೆ ಆದರೆ ಸರಕಾರಿ ಆಚರಣೆಗಳು ಸರಕಾರದ ಅದೇಶಕ್ಕೆ ಸೀಮಿತವಾಗಿದೆ. ಇದರ ಸದುಪಯೋಗ ಸಾಮಾನ್ಯ ಜನರಿಗೆ ಸಿಗುವಂತೆ ಆಗಬೇಕು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ತಿಳಿಸಿದರು. ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯ ಬಗ್ಗೆ ನಾವು ಜೀವನದಲ್ಲಿ ಅಳವಡಿಸಿಕೊಳ್ಳಲು ಅವರು ತಿಳಿಸಿದರು.
ಅಂಬೇಡ್ಕರ್ ಭವನದಲ್ಲಿ ಸುಸಜ್ಜಿತ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವ ಸಲುವಾಗಿ ಸೀಲಿಂಗ್ ನ ವ್ಯವಸ್ಥೆ ಆಗಬೇಕಾಗಿದೆ, ಅದಕ್ಕೆ ಶಾಸಕರ ನಿಧಿಯಿಂದ ಹಣ ನೀಡುವುದಾಗಿ ಭರವಸೆ ನೀಡಿದರು.
ಕೇಪು ಕಲ್ಲಂಗಳ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗುಣಶ್ರೀ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು.
ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಬಿಸಿರೋಡಿನ ಸರ್ಕಲ್ ಬಳಿಯಿಂದ ಅಂಬೇಡ್ಕರ್ ಭವನದ ವರೆಗೆ ವಿಶೇಷ ಆಕರ್ಷಣೆಯ ಜಾಥ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ಎಸ್.ಪೂಜಾರಿ, ತಹಶಿಲ್ದಾರ್ ಅರ್ಚನಾ ಭಟ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಜಿಲ್ಲಾ ಮಟ್ಟದ ಜಾಗೃತಿ ಅಧಿಕಾರಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…