ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ : ಬಾಲಕಿಯನ್ನು ಕೊಂದ ಆರೋಪಿ ಎನ್ಕೌಂಟರ್ ಗೆ ಬಲಿ

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ  ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್​ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್​ ಕುಮಾರ್​ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್​ ಕುಮಾರ್​​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್​​ ​ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!