ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ : ಬಾಲಕಿಯನ್ನು ಕೊಂದ ಆರೋಪಿ ಎನ್ಕೌಂಟರ್ ಗೆ ಬಲಿ

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ  ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್​ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್​ ಕುಮಾರ್​ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್​ ಕುಮಾರ್​​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್​​ ​ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!