ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್ ಕುಮಾರ್ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.
ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಗುಂಡೇಟಿಗೆ ಆರೋಪಿ ಬಲಿ
ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್ ಕುಮಾರ್ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್ ಕುಮಾರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…