ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಯುವಕನನ್ನು ರಕ್ಷಿಸಲು ಹೋಗಿ ಸೈನಿಕ ನೀರುಪಾಲು

ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.

 

ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!