ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.
ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…