ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.
ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…