ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಕಾಪು ಪುರಸಭೆಯ ಜನಾರ್ಧನ ವಾರ್ಡಿನ ವೈಟ್ & ವೈಟ್ ಬಸ್ ನಿಲ್ದಾಣದಿಂದ ಸಂಶುಧ್ಧಿನ್ ಮನೆ ವರೆಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಮಲ್ಲಾರು ಗರಡಿ ವಾರ್ಡಿನ ಕುಡ್ತಿಮಾರ್ ರಸ್ತೆ ಅಭಿವೃದ್ಧಿ – 15 ಲಕ್ಷ, ಮಲ್ಲಾರು ರೈಲ್ವೆ ಬ್ರಿಡ್ಜ್ ನಿಂದ ಎಸ್.ಎಸ್ ಲೇಔಟ್ ರಸ್ತೆ ಕಾಂಕ್ರೀಟಿಕರಣ – 5 ಲಕ್ಷ, ಭಾರತ್ ನಗರ ವಾರ್ಡಿನ ಕಾಲೋನಿಗಳಲ್ಲಿ ಚರಂಡಿ ಸಹಿತ ರಸ್ತೆ ಅಭಿವೃದ್ಧಿ – 40 ಲಕ್ಷ, ದಂಡತೀರ್ಥ ವಾರ್ಡಿನ ರಸ್ತೆ ಸಹಿತ ಚರಂಡಿ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಶೈಲೇಶ್ ಅಮೀನ್, ಉಮೇಶ್ ಕರ್ಕೇರ, ಅರುಣ್ ಶೆಟ್ಟಿ ಪಾದೂರು, ಸುರೇಶ್ ದೇವಾಡಿಗ, ಲತಾ ವಿಶ್ವನಾಥ್, ರತ್ನಾಕರ್ ಶೆಟ್ಟಿ ಹಾಗೂ ಗುತ್ತಿಗೆದಾರರು, ಸ್ಥಳೀಯರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…