ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಕಾಪು ಪುರಸಭೆಯ ಜನಾರ್ಧನ ವಾರ್ಡಿನ ವೈಟ್ & ವೈಟ್ ಬಸ್ ನಿಲ್ದಾಣದಿಂದ ಸಂಶುಧ್ಧಿನ್ ಮನೆ ವರೆಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಮಲ್ಲಾರು ಗರಡಿ ವಾರ್ಡಿನ ಕುಡ್ತಿಮಾರ್ ರಸ್ತೆ ಅಭಿವೃದ್ಧಿ – 15 ಲಕ್ಷ, ಮಲ್ಲಾರು ರೈಲ್ವೆ ಬ್ರಿಡ್ಜ್ ನಿಂದ ಎಸ್.ಎಸ್ ಲೇಔಟ್ ರಸ್ತೆ ಕಾಂಕ್ರೀಟಿಕರಣ – 5 ಲಕ್ಷ, ಭಾರತ್ ನಗರ ವಾರ್ಡಿನ ಕಾಲೋನಿಗಳಲ್ಲಿ ಚರಂಡಿ ಸಹಿತ ರಸ್ತೆ ಅಭಿವೃದ್ಧಿ – 40 ಲಕ್ಷ, ದಂಡತೀರ್ಥ ವಾರ್ಡಿನ ರಸ್ತೆ ಸಹಿತ ಚರಂಡಿ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಶೈಲೇಶ್ ಅಮೀನ್, ಉಮೇಶ್ ಕರ್ಕೇರ, ಅರುಣ್ ಶೆಟ್ಟಿ ಪಾದೂರು, ಸುರೇಶ್ ದೇವಾಡಿಗ, ಲತಾ ವಿಶ್ವನಾಥ್, ರತ್ನಾಕರ್ ಶೆಟ್ಟಿ ಹಾಗೂ ಗುತ್ತಿಗೆದಾರರು, ಸ್ಥಳೀಯರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…