ಜನ ಮನದ ನಾಡಿ ಮಿಡಿತ

Advertisement

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆಯಿತು.

 

ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಹರಿದ್ವಾರದ ವ್ಯಾಸಾಶ್ರಮಕ್ಕೆ ತರಲಾಗಿತ್ತು. ಇದು ಚಾರಿತ್ರಿಕವಾಗಿರುವ ದಾಖಲೆಯಾಗಿದೆ. ಎಲ್ಲಾ ಪವಿತ್ರ ನದಿಗಳ ತೀರ್ಥವನ್ನು ಸ್ವಾಮೀಜಿಯವರ ವೃಂದಾವನದಲ್ಲಿ ಅಭಿಷೇಕ ಮಾಡಲಾಯಿತು. ಇನ್ನು 1008 ಬೆಳ್ಳಿ ನಾಣ್ಯಗಳನ್ನು ಸೇವಾದಾರರಿಗೆ ವಿತರಿಸಲಾಯಿತು. ಆ ಬಳಿಕ ಸ್ವರ್ಣ ಪುಷ್ಪಾರ್ಚನಾ ಕಾರ್ಯಕ್ರಮ ನಡೆಯಿತು. ಮೊದಲಿಗೆ ವೃಂದಾವನದಲ್ಲಿರುವ ಹನುಮಂತ ದೇವರ ಪಾದಗಳಿಗೆ ಸ್ವರ್ಣ ಪುಷ್ಪಾಚನೆ ನಡೆಸಲಾಯಿತು. ಬಳಿಕ ಗುರುಪಾದುಕೆಗೆ ಸ್ವರ್ಣ ಪುಷ್ಪಾಚನೆ ನಡೆಯಿತು. ಆ ಸ್ವರ್ಣ ಪುಷ್ಪಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು.

ಆಗಮಿಸಿದ ಎಲ್ಲಾ ಭಕ್ತರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಗಂಧ ಪ್ರಸಾದ ನೀಡಲಾಯಿತು. ತಿರುಪತಿ ಲಾಡು, ಫಲವಸ್ತು, ಮಹಿಳೆಯರಿಗೆ ಸೀರೆ, ಗಂಡಸರಿಗೆ ಧೋತಿ, ಹೆಣ್ಣುಮಕ್ಕಳಿಗೆ, ಗಂಡುಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಸುಧೀಂದ್ರ ವೇದಿಕೆಯಲ್ಲಿ ವಿಷ್ಣು ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ, ಸಾಮೂಹಿಕ ದುರ್ಗಾ ನಮಸ್ಕಾರ, ಸಹಸ್ರ ಚಂಡಿಕಾಯಾಗ, ಋತ್ಮಿಕಾ ಯಾಗ, ಗುರುಗುಣಗಾನ, ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಜೆ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆರ್ಶೀವಚನ ನೀಡಿದರು. ದೇಶ, ವಿದೇಶದಿಂದ ನಾಲ್ಕು ಸಾವಿರಕ್ಕೂ ಮಿಕ್ಕಿ ಭಕ್ತರು ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಧನ್ಯರಾದರು.

ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಟಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!