ಜನ ಮನದ ನಾಡಿ ಮಿಡಿತ

Advertisement

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆಯಿತು.

 

ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಹರಿದ್ವಾರದ ವ್ಯಾಸಾಶ್ರಮಕ್ಕೆ ತರಲಾಗಿತ್ತು. ಇದು ಚಾರಿತ್ರಿಕವಾಗಿರುವ ದಾಖಲೆಯಾಗಿದೆ. ಎಲ್ಲಾ ಪವಿತ್ರ ನದಿಗಳ ತೀರ್ಥವನ್ನು ಸ್ವಾಮೀಜಿಯವರ ವೃಂದಾವನದಲ್ಲಿ ಅಭಿಷೇಕ ಮಾಡಲಾಯಿತು. ಇನ್ನು 1008 ಬೆಳ್ಳಿ ನಾಣ್ಯಗಳನ್ನು ಸೇವಾದಾರರಿಗೆ ವಿತರಿಸಲಾಯಿತು. ಆ ಬಳಿಕ ಸ್ವರ್ಣ ಪುಷ್ಪಾರ್ಚನಾ ಕಾರ್ಯಕ್ರಮ ನಡೆಯಿತು. ಮೊದಲಿಗೆ ವೃಂದಾವನದಲ್ಲಿರುವ ಹನುಮಂತ ದೇವರ ಪಾದಗಳಿಗೆ ಸ್ವರ್ಣ ಪುಷ್ಪಾಚನೆ ನಡೆಸಲಾಯಿತು. ಬಳಿಕ ಗುರುಪಾದುಕೆಗೆ ಸ್ವರ್ಣ ಪುಷ್ಪಾಚನೆ ನಡೆಯಿತು. ಆ ಸ್ವರ್ಣ ಪುಷ್ಪಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು.

ಆಗಮಿಸಿದ ಎಲ್ಲಾ ಭಕ್ತರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಗಂಧ ಪ್ರಸಾದ ನೀಡಲಾಯಿತು. ತಿರುಪತಿ ಲಾಡು, ಫಲವಸ್ತು, ಮಹಿಳೆಯರಿಗೆ ಸೀರೆ, ಗಂಡಸರಿಗೆ ಧೋತಿ, ಹೆಣ್ಣುಮಕ್ಕಳಿಗೆ, ಗಂಡುಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಸುಧೀಂದ್ರ ವೇದಿಕೆಯಲ್ಲಿ ವಿಷ್ಣು ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ, ಸಾಮೂಹಿಕ ದುರ್ಗಾ ನಮಸ್ಕಾರ, ಸಹಸ್ರ ಚಂಡಿಕಾಯಾಗ, ಋತ್ಮಿಕಾ ಯಾಗ, ಗುರುಗುಣಗಾನ, ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಜೆ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆರ್ಶೀವಚನ ನೀಡಿದರು. ದೇಶ, ವಿದೇಶದಿಂದ ನಾಲ್ಕು ಸಾವಿರಕ್ಕೂ ಮಿಕ್ಕಿ ಭಕ್ತರು ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಧನ್ಯರಾದರು.

ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಟಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!