ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಮರ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಬೀಸಿದ ಗಾಳಿ, ಮಳೆಗೆ ಜನ ಅಕ್ಷರಶಃ ದಿಕ್ಕಾಪಾಲಾದ ಘಟನೆ ನಡೆಯಿತು. ಉಡುಪಿಯ ರಾಜಾಂಗಣ ಚಿತ್ಪಾಡಿ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತು. ಇನ್ನು ಭಾರೀ ಗಾಳಿಮಳೆಗೆ ಹಿರಿಯಡ್ಕ ಸಮೀಪ ಇಂದಿರಾ ಸೇರಿಗಾರ್ತಿ ಎಂಬವರಿಗೆ ಸೇರಿದ ಮನೆಯ ಮೇಲ್ಪಾವಣಿ ಹಾರಿಹೋಗಿದೆ.ಮನೆಯ ವಿದ್ಯುತ್ ಸಂಪರ್ಕದ ಕಂಬದ ವಯರ್ ಕೂಡ ಛಿದ್ರಗೊಂಡಿದೆ.
ಘಟನೆಯಲ್ಲಿ ಅಂದಾಜು ಮೂರು ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುಳಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…