ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಮರ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಬೀಸಿದ ಗಾಳಿ, ಮಳೆಗೆ ಜನ ಅಕ್ಷರಶಃ ದಿಕ್ಕಾಪಾಲಾದ ಘಟನೆ ನಡೆಯಿತು. ಉಡುಪಿಯ ರಾಜಾಂಗಣ ಚಿತ್ಪಾಡಿ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತು. ಇನ್ನು ಭಾರೀ ಗಾಳಿಮಳೆಗೆ ಹಿರಿಯಡ್ಕ ಸಮೀಪ ಇಂದಿರಾ ಸೇರಿಗಾರ್ತಿ ಎಂಬವರಿಗೆ ಸೇರಿದ ಮನೆಯ ಮೇಲ್ಪಾವಣಿ ಹಾರಿಹೋಗಿದೆ.ಮನೆಯ ವಿದ್ಯುತ್ ಸಂಪರ್ಕದ ಕಂಬದ ವಯರ್ ಕೂಡ ಛಿದ್ರಗೊಂಡಿದೆ.
ಘಟನೆಯಲ್ಲಿ ಅಂದಾಜು ಮೂರು ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುಳಿದ ಬಗ್ಗೆ ವರದಿಯಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…