ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಸೌರಮಾನ ಯುಗಾದಿ ಉತ್ಸವ

ಇತಿಹಾಸ ಪ್ರಸಿದ್ಧ ಭೂ ಕೈಲಾಸ ಪ್ರತೀತಿಯ ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಉತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಶ್ರೀ ಕಾರಿಂಜೇಶ್ವರ ಸನ್ನಿಧಿಯಲ್ಲಿ ಶ್ರೀ ಪರಮೇಶ್ವರ ದೇವರ ಬಲಿ ಉತ್ಸವದ ಬಳಿಕ ದೇವರ ಉತ್ಸವ ಬಲಿ ಮೂರ್ತಿ ಕಾರಿಂಜಬೆಟ್ಟದಿಂದ ಕೆಳಗೆ ಇಳಿದು ಶ್ರೀ ಪಾರ್ವತಿ ಸನ್ನಿಧಿಗೆ ಆಗಮಿಸಿತು. ಶ್ರೀ ಪಾರ್ವತಿ ಸನ್ನಿಧಿಯಲ್ಲಿ ಪೂಜೆ ಬಳಿಕ ವಸಂತ ಮಂಟಪದಲ್ಲಿ ಶ್ರೀ ಪಾರ್ವತಿ ದೇವಿ ಸಹಿತ ಕಾರಿಂಜೇಶ್ವರನಿಗೆ ಪೂಜೆ ನಡೆಯಿತು. ನಂತರ ಪಾರ್ವತಿ-ಪರಮೇಶ್ವರ ಜತೆಗೂಡಿ ರಥಾರೂಢರಾಗಿ ರಥೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ವಸಂತೋತ್ಸವ ಮತ್ತು ಪಂಚಾಂಗ ಶ್ರವಣ ಕಾರ್ಯಕ್ರಮವೂ ನಡೆಯಿತು.

ದೇಗುಲದ ಅರ್ಚಕರಾದ ಜಯಶಂಕರ ಉಪಾಧ್ಯಾಯ ಹಾಗೂ ಮಿಥುನ್ ರಾಜ್ ನಾವಡ ಮತ್ತು ಪುರೋಹಿತರಾದ ಬಾಲಕೃಷ್ಣ ಆಚಾರ್ಯ, ರಾಧಾಕೃಷ್ಣ ಮಯ್ಯ, ಪ್ರಭಾಕರ ಆಚಾರ್ಯ, ಮಹೇಶ್ ಮಯ್ಯ ಅವರ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು. ವಿದ್ವಾನ್ ಕೆ.ಎಲ್.ಆಚಾರ್ಯ ಹಾಗೂ ಯತಿರಾಜ ಆಚಾರ್ಯ ಅವರ ಬಳಗದವರು ಪಂಚಾಂಗ ಶ್ರವಣ ಕಾರ್ಯಕ್ರಮ ನೆರವೇರಿಸಿದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಗ್ರಾಮಣಿಗಳಾದ ಗಣೇಶ ಮುಚ್ಚಿನ್ನಾಯ, ವೆಂಕಟರಾಜ ಎಳಚಿತ್ತಾಯ, ಲಕ್ಷ್ಮೀ ನಾರಾಯಣ ಆಚಾರ್ಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಕುಮಾರ್ ಅಮೀನ್, ಮಾಜಿ ಅಧ್ಯಕ್ಷರಾದ ಪಿ.ಜಿನರಾಜ ಆರಿಗ, ಶಿವಪ್ಪ ಗೌಡ ನಿನ್ನಿಕಲ್ಲು, , ಬಂಟ್ವಾಳ ತಾ.ಪಂ.ಇಒ ಸಚಿನ್ ಕುಮಾರ್, ಕಾವಳಪಡೂರು ಗ್ರಾ. ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಶಾಂತ್, ರಾಧಾ ಆಚಾರ್ಯ, ಧನಲಕ್ಷ್ಮಿ ಸಿ.ಬಂಗೇರ,ಎಂ.ಉದಯ ನಾಯಕ್, ಪ್ರೇಮನಾಥ ಪೀರ‍್ಯಗುತ್ತು, ಜನಾರ್ದನ ಆಚಾರ್ಯ ಬಾಳ್ತಬಲು, ದಯಾನಂದ ಶೆಟ್ಟಿ ಅಮೈ, ದೇವಸ್ಥಾನದ ಮ್ಯಾನೇಜರ್ ವಿನಯ ಕುಮಾರ್ ಮತ್ತು ಸಿಬಂದಿವರ್ಗ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!