ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೇಡಡ್ಕ ನಿವಾಸಿ ರಮಿತಾ ( 22) ಮೃತ ಮಹಿಳೆ ಎಂದು ತಿಳಿದು ಬಂದಿದೆ. ತಮಿಳುನಾಡು ಮೂಲದ ರಾಮಕೃತ (57) ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ.
ಮೃತ ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಅಂಗಡಿ ನಡೆಸುತ್ತಿದ್ದರು. ಆರೋಪಿ ರಾಮಕೃತ ಪಾನಮತ್ತನಾಗಿ ಬಂದು ಆಕೆಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ವೈಷಮ್ಯದಿಂದ ಎ.8 ರಂದು ಸಂಜೆ 3 ಗಂಟೆಗೆ ಅಂಗಡಿಯೊಳಗೆ ನುಗ್ಗಿದ ಆರೋಪಿ ಯುವತಿಗೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದನು. ಕೃತ್ಯ ನಡೆಸಿ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.
ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…