ದಿನಾಂಕ 14-04-2025 ರಂದು ಮುಂಬೈಯಲ್ಲಿ ಬಂಟರ ಸಂಘ ಮುಂಬೈ ಇದರ ವತಿಯಿಂದ ಜರಗಿದ “ಸ್ನೇಹ ಸಮ್ಮಿಲನ-2025” ರ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ರಘುರಾಮ್ ಶೆಟ್ಟಿ ಅವೆನ್ಯು ಇವರನ್ನು ಅತ್ಯುತ್ತಮ ಹೊಟೇಲ್ ಉದ್ಯಮಿ ಎಂದು, ಶ್ರೀ ತೋನ್ಸೆ ಆನಂದ್ ಎಂ. ಶೆಟ್ಟಿಯವರನ್ನು ಅತ್ಯುತ್ತಮ ಕೈಗಾರಿಕಾ ಉದ್ಯಮಿ ಎಂದು ಹಾಗೂ ನಟಿ ಪೂಜಾ ಹೆಗ್ಡೆಯವರ ಸಿನಿರಂಗದ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರವೀಣ್ ಭೋಜ ಶೆಟ್ಟಿಯವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾ. ಕೆ. ಪ್ರಕಾಶ್ ಶೆಟ್ಟಿಯವರು, ಗೌರವಾನ್ವಿತ ಅತಿಥಿಯಾಗಿ ಸಿ ಎ ಶಂಕರ್ ಶೆಟ್ಟಿ, ಶ್ರೀ ರವಿನಾಥ್ ಶೆಟ್ಟಿ ಅಂಕಲೇಶ್ವರ್, ಶ್ರೀ ಜಯರಾಮ್ ಎನ್ ಶೆಟ್ಟಿಯವರು ಆಗಮಿಸಿದ್ದರು. ಅಲ್ಲದೆ ನಟಿ ಪೂಜಾ ಹೆಗ್ಡೆಯವರ ಆಗಮನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತ್ತು.
ಈ ಸಂದರ್ಭದಲ್ಲಿ ಮಹೇಶ್ ಎಸ್.ಶೆಟ್ಟಿ ಬಾಬಾ’ಸ್ ಗ್ರೂಪ್ , ಡಾ. ಆರ್ ಕೆ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಚಿತ್ರ ಆರ್. ಶೆಟ್ಟಿ, ರಮೇಶ್ ಶೆಟ್ಟಿ ಸವಿನ್ ಶೆಟ್ಟಿ ಯೂತ್ ಬಂಟ್ಸ್, ನವೀನ್ ಶೆಟ್ಟಿ ಇನ್ನಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಳದಮಯಂತಿ ನಾಟಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಶೋಕ್ ಪಕ್ಕಳ, ಕರ್ನೂರು ಮೋಹನ್ ರೈ ಮತ್ತು ಬಾಬಾ ಅರಸ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…