ಬ್ರಿಶಾ.ಬಿ.ಇರಾ ಮೂಲತಃ ಮಂಗಳೂರಿನ ಇರಾ ಗ್ರಾಮದವರಾದ ಇವರು ಭಾಸ್ಕರ್ ಇರಾ ಮತ್ತು ಸಂಜನಾ ಬಿ ಇರಾ ಇವರ ಸುಪುತ್ರಿ. ಪ್ರಸ್ತುತ ವಿಜಯಪುರದ ವಿದ್ಯಾ ವಿಕಾಸ್ ಮಂದಿರ ಸ್ಕೂಲ್ ನಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಭರತನಾಟ್ಯ ವೆಸ್ಟರ್ನ್ ಡ್ಯಾನ್ಸ್ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭರವಸೆ ಮೂಡಿಸುವ ಪ್ರತಿಭೆಯಾಗಿದ್ದು, ಇವರು ತನ್ನ ನಾಲ್ಕನೇ ವಯಸ್ಸಿನಿಂದಲೇ ಭರತನಾಟ್ಯ ಅಭ್ಯಾಸವನ್ನು ಕುಮಾರಿ ಪೂರ್ವಿ ಎನ್ ತಳ್ವಾರ್ ಇವರಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಭರತನಾಟ್ಯದಲ್ಲಿ 2024ರಲ್ಲಿ ಮೈಸೂರಿನಲ್ಲಿ ನಡೆದಿರುವ ಲಾಸ್ಯ ನವರಸೋ ಉತ್ಸವದಲ್ಲಿ ಲಾಸ್ಯಸಂಗಮ ಪ್ರಶಸ್ತಿ ಬೆಂಗಳೂರಿನಲ್ಲಿ ನಡೆದ ಡ್ಯಾನ್ಸ್ ರಿದಂ 2025 ಭಾಗವಹಿಸಿ ಪ್ರಶಸ್ತಿಯನ್ನು ಪಡೆದು ಕೀರ್ತಿ ತಂದಿದ್ದಾರೆ.
ಅಲ್ಲದೆ ಮಂಗಳೂರು ಬೆಳಗಾವಿ, ಅಥಣಿ ,ಮುಧೋಳ್, ವಿಜಯಪುರ ಮುಂತಾದ ಕಡೆ 30ಕ್ಕೂ ಹೆಚ್ಚು ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ಮಾಡಿ ಅಭಿನಂದನ ಪತ್ರ ಪಡೆದುಕೊಂಡಿದ್ದು, ಅನ್ ಲೈನ್ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬ್ರಿಶಾ ನಾಟ್ಯದಲ್ಲಿ ಮಾತ್ರವಲ್ಲದೇ ಚಿನ್ನರ ಚಿತ್ತಾರ ಡ್ರಾಯಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿದ್ದಾರೆ. ವಾಯ್ಸ್ ಆಫ್ ಆರಾಧನಾ ತಂಡದಲ್ಲಿ ಭಾಗವಹಿಸಿ ಮಾರ್ಚ್ ತಿಂಗಳ ವಿಜೇತರಾಗಿ ಹೊರ ಹೊಮ್ಮಿರುವುದು ವಿಶೇಷ.
ಇವರಿಗೆ ಹಲವಾರು ಪ್ರಶಸ್ತಿಗಳು ದೊರಕಿದ್ದು, ಕರ್ನಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಬೆಂಗಳೂರು ಹಾಗೂ ಗಡಿನಾಡು ನುಡಿ ರಾಷ್ಟ್ರೀಯ ವಾರ್ತ ಪತ್ರಿಕೆ, ಇವರ ಸಂಯುಕ್ತ ಆಶ್ರಯದಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ 2025 ಕರ್ನಾಟಕ ಬಾಲ್ಯ ನಾಟ್ಯ ರಾಣಿ ಪ್ರಶಸ್ತಿ ಅಲ್ಲದೆ ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇವರ ಆಶ್ರಯದಲ್ಲಿ ಸುವರ್ಣ ಕರ್ನಾಟಕ ನಾಟ್ಯ ಮಯೂರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…