ಸಿಎಂ ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ಕರ್ನಾಟಕದವರಿಗೆ ಸಾಕಷ್ಟು ಉಪಕಾರಿಯಾಗಿದೆ. ಕೇಂದ್ರ ಸರಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರ ಕಡಿಮೆ ಮಾಡಬೇಕು. ಇದನ್ನು ಏರಿಸಿದ ಕಾರಣವೇ ಇಂದು ಬೆಲೆ ಏರಿಕೆ ಸಂಭವಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ MLC ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂಧನ ದರವನ್ನು ಏರಿಸಿದ ಕೇಂದ್ರ ಸರಕಾರದ ವಿರುದ್ಧ ಜನಾಕ್ರೋಶ ಧರಣಿ ಮಾಡುವ ಬದಲು ರಾಜ್ಯ ಸರಕಾರದ ವಿರುದ್ಧ ಜನಾಕ್ರೋಶ ಧರಣಿಯನ್ನು ಮಾಡುತ್ತಾ ಇದ್ದೀರಿ. ಇಂದು ಬೆಲೆ ಏರಿಕೆ ಸಂಭವಿಸಿದರೆ ಅದಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ ಹೊರಬೇಕು. ಒಂದು ಲೀಟರ್ ಪೆಟ್ರೋಲ್ ಬೆಲೆಯ 60 ರೂ. ಸುಂಕ, ಡೀಸೆಲ್ ನ 47 ರೂ. ಸುಂಕ ನೇರವಾಗಿ ಕೇಂದ್ರ ಸರಕಾರಕ್ಕೆ ಹೋಗುತ್ತಿದೆ. ಇದನ್ನು ಮೊದಲು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಪರ ನೀತಿಯನ್ನು ಜಾರಿಗೆ ತರದೆ ರೈತ ವಿರೋಧಿ ಕಾನೂನನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿ ಬೆಂಗಳೂರಿನಲ್ಲಿ ಏಪ್ರಿಲ್ 17 ರಂದು ಜನಾಕ್ರೋಶ ಧರಣಿಯನ್ನು ಕಾಂಗ್ರೆಸ್ ಸರಕಾರ ಹಮ್ಮಿಕೊಂಡು ನಂತರ ಕರ್ನಾಟಕದಾದ್ಯಂತ ವಿಸ್ತರಣೆ ಮಾಡಲಾಗುವುದೆಂದು ತಿಳಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…